ಜಮ್ಮು-ಕಾಶ್ಮೀರದ ನಾಲ್ವರು ಮಾಜಿ ಮುಖ್ಯಮಂತ್ರಿಗಳಿಗಿದ್ದ ವಿಶೇಷ ಭದ್ರತೆ ಹಿಂಪಡೆದ ಮೋದಿ ಸರ್ಕಾರ

Prasthutha|

ಸೇಡಿನ ಕ್ರಮ ಎಂದ ಮುಖಂಡರು

- Advertisement -

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ನ ಫಾರೂಖ್ ಅಬ್ದುಲ್ಲಾ, ಅವರ ಪುತ್ರ ಹಾಗೂ ಪಕ್ಷದ ಉಪಾಧ್ಯಕ್ಷ ಉಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಅವರಿಗೆ ನೀಡಲಾಗಿದ್ದ ಎಸ್ ಎಸ್ ಜಿ ವಿಶೇಷ ಭದ್ರತೆಯನ್ನು ಹಿಂಪಡೆಯಲಾಗಿದೆ.

ಗುರುವಾರ ನಡೆದ ಭದ್ರತಾ ಪರಿಶೀಲನೆ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ವರೆಗೆ ಅವರಿಗೆ ವಿಶೇಷ ಭದ್ರತಾ ಪಡೆ (ಎಸ್ ಎಸ್ ಜಿ) ಭದ್ರತೆ ನೀಡುತ್ತಿತ್ತು. ಸರ್ಕಾರದ ಈ ನಿರ್ಧಾರದಿಂದ ಅವರಿದ್ದ ಈ ವಿಶೇಷ ಭದ್ರತೆ ಇನ್ನು ರದ್ದಾಗಲಿದೆ.

- Advertisement -

ವಿಶೇಷ ಭದ್ರತಾ ಪಡೆಯು ಜಮ್ಮು ಕಾಶ್ಮೀರದ ಮುಖ್ಯಮಂತ್ರಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಿಗೆ ಭದ್ರತೆ ಒದಗಿಸುವ ಕೆಲಸ ಮಾಡುತ್ತಿದೆ.

ಭದ್ರತೆಯನ್ನು ಹಿಂಪಡೆಯುವ ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಮೋದಿ ಸರ್ಕಾರದ ಸೇಡಿಕ ಕ್ರಮ ಎಂದು ಟೀಕಿಸಿದೆ.

Join Whatsapp