ರಾಷ್ಟ್ರಪತಿ ಪಲಾಯನ; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Prasthutha|

ಕೊಲಂಬೊ: ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ದೇಶದಿಂದ ಪಲಾಯನ ಮಾಡಿದ ಬೆನ್ನಲ್ಲೇ ಬಿಕ್ಕಟ್ಟು ಪೀಡಿತ ಶ್ರೀಲಂಕಾದಲ್ಲಿ ಬುಧವಾರ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

- Advertisement -

“ಅಧ್ಯಕ್ಷರು ದೇಶದಿಂದ ಹೊರಗಿರುವುದರಿಂದ, ದೇಶದಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಲು ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ” ಎಂದು ಪ್ರಧಾನ ಮಂತ್ರಿಯವರ ವಕ್ತಾರ ಡಿನೋಕ್ ಕೊಲೊಂಬೆಜ್ ಪ್ರಕಟನೆಯಲ್ಲಿ ತಿಳಿಸಿದರು.

Join Whatsapp