ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಬೆಲೆ ಏರಿಕೆ : ಸಿ.ಟಿ. ರವಿ

Prasthutha|

ಬೆಂಗಳೂರು: ಕಾಂಗ್ರೆಸ್ ಮಾಡಿದ ಪಾಪದ ಸಾಲ ತೀರಿಸಲು ಬೆಲೆ ಏರಿಕೆಯಾಗುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

- Advertisement -


ಈ ಬಗ್ಗೆ ಮಾತನಾಡಿದ ಅವರು, ಬೆಲೆ ಏರಿಕೆ ಭಾರತದಲ್ಲಿ ಮಾತ್ರವಲ್ಲ. ಜಾಗತಿಕ ಮಟ್ಟದಲ್ಲಿ ಏರಿಕೆಯಾಗಿದೆ. ಸಂಕಷ್ಟದ ಕಾರಣದಿಂದಾಗಿ ಈಗ ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆ ನಿಗದಿತ ಸಮಯಕ್ಕೆ ಮಾತ್ರ ಆಗಿರುತ್ತದೆ. ದೇಶದ ಭವಿಷ್ಯದ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.


ಬೆಲೆ ಏರಿಕೆಯ ಬಗ್ಗೆ ಕಾಂಗ್ರೆಸ್ ನವರಿಗೆ ಪ್ರತಿಭಟನೆ ಮಾಡುವ ನೈತಿಕತೆ ಇಲ್ಲ. ಕಾಂಗ್ರೆಸ್ ನವರು ದಿನಾ ಎತ್ತಿನ ಗಾಡಿಯಲ್ಲಿ ಬರುತ್ತಾರೋ ಅಥವಾ ಒಂದು ದಿನ ಶೋ ಕೊಡಲು ಮಾತ್ರ ಬಂದಿದ್ದಾರಾ ಎಂದು ಎಂದು ಪ್ರಶ್ನಿಸಿದ್ದಾರೆ.

Join Whatsapp