ರಾಷ್ಟ್ರಪತಿಯವರಿಗೆ ಭದ್ರತಾ ಲೋಪಗಳ ಬಗ್ಗೆ ವಿವರಣೆ ನೀಡಿದ ಪ್ರಧಾನಿ

Prasthutha|

ನವದೆಹಲಿ: ಪ್ರಧಾನಿ ಮೋದಿ ಅವರು ಫಿರೋಜ್ ಪುರದಿಂದ ವಾಪಸಾದ ಘಟನೆ ಸಂಬಂಧ ಗುರುವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

- Advertisement -

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸಹ ಪ್ರಧಾನ ಮಂತ್ರಿಗಳ ಜೊತೆ ಮಾತನಾಡಿ ಭದ್ರತಾ ಲೋಪ ಉಂಟಾಗಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಪಂಜಾಬ್ ಸರ್ಕಾರ ಆದೇಶ ನೀಡಿದ್ದು, ಇನ್ನು ಮೂರು ದಿನಗಳಲ್ಲಿ ವರದಿ ಸಲ್ಲಿಕೆಯಾಗಲಿದೆ. ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ನಾಳೆ ಅರ್ಜಿ ವಿಚಾರಣೆ ನಡೆಯಲಿದೆ.

- Advertisement -

ಪಂಜಾಬ್ ಗೆ ಹೊರಟ ಪ್ರಧಾನ ಮಂತ್ರಿ ಅರ್ಧದಾರಿಯಲ್ಲಿ ಪ್ರತಿಭಟನಕಾರರಿಂದಾಗಿ ದೆಹಲಿಗೆ ವಾಪಸ್ಸಾಗಿದ್ದು ದೇಶ ಮಟ್ಟದಲ್ಲಿ ಭಾರೀ ಸುದ್ದಿಯಾಗಿದ್ದು ಪರ-ವಿರೋಧ ಮಾತುಗಳು ಕೇಳಿಬರುತ್ತಿವೆ. ಚುನಾವಣೆ ಸನ್ನಿಹಿತವಾಗಿರುವ ಪಂಜಾಬ್ ನಲ್ಲಿ ರಾಜಕೀಯವಾಗಿ ಇದು ಬಹಳ ಸದ್ದುಮಾಡುತ್ತಿದೆ.

Join Whatsapp