ಪರೋಲ್ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಕೈದಿ ನಾಪತ್ತೆ| ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ ಘೋಷಣೆ

Prasthutha|

ಮೈಸೂರು: ಪರೋಲ್ ಮೇಲೆ ಬಿಡುಗಡೆಯಾಗಿದ್ದ ಕೈದಿ ತಲೆ ಮರೆಸಿಕೊಂಡಿರುವ ಕೈದಿಯ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ನಗದು ಬಹುಮಾನ ನೀಡುವುದಾಗಿ ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್​ ಘೋಷಣೆ ಮಾಡಿದ್ದಾರೆ.

- Advertisement -

ಸೋಮ ಅಲಿಯಾಸ್ ಕೋತಿ ಸೋಮ ಪರಾರಿಯಾದ ಅಪರಾಧಿ. ಸೋಮ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದು, ಮಂಡ್ಯ 3ನೇ ಎಫ್.ಟಿ.ಸಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮೈಸೂರು ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿಯಾಗಿದ್ದ ಸೋಮ, 30 ದಿನಗಳ ಪರೋಲ್ ರಜೆ ಮೇಲೆ ತೆರಳಿದ್ದು, 2009ರ ನ.1ರಂದು ವಾಪಸ್ ಕೇಂದ್ರ​ ಕಾರಾಗೃಹಕ್ಕೆ ಶರಣಾಗಬೇಕಿತ್ತು. ಆದರೆ ಪರಾರಿಯಾದ ದಿನದಿಂದ ಇಲ್ಲಿಯವರೆಗೂ ಕಾರಾಗೃಹಕ್ಕೆ ಶರಣಾಗಿಲ್ಲ. ಈ ಸಂಬಂಧ ಮೈಸೂರು ನಗರ ನಬರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Join Whatsapp