ತೀವ್ರ ವಿರೋಧದ ನಡುವೆ ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಮಂಡನೆ

Prasthutha|

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಮಧ್ಯಾಹ್ನ ತರಾತುರಿಯಲ್ಲಿ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಅವಕಾಶ ನೀಡಿದ್ದು, ಕಾನೂನು ಸಚಿವ ಮಾಧುಸ್ವಾಮಿ ವಿಧೇಯಕವನ್ನು ಮಂಡಿಸಿದ್ದಾರೆ.

- Advertisement -

ವಿಧೇಯಕದ ಪ್ರತಿ ನೀಡದೆ ಮಂಡನೆಗೆ ಅವಕಾಶ ನೀಡಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಸರಕಾರ ಕಳ್ಳತನದಿಂದ ವಿಧೇಯಕವನ್ನು ಮಂಡಿಸಿದೆ. ಇಂತ ಕೆಟ್ಟ ಸರಕಾರ ಕರ್ನಾಟಕದ ಇತಿಹಾಸದಲ್ಲಿ ನೋಡಿಲ್ಲ ಎಂದು ಹೇಳಿದರು.

ವಿಧೇಯಕದಲ್ಲಿರುವ ಪ್ರಮುಖ ಅಂಶ: ಬಲವಂತದ ಮತಾಂತರ ಮಾಡುವಂತಿಲ್ಲ, ಯಾವುದೇ ವ್ಯಕ್ತಿ ಮತಾಂತರ ಹೊಂದಬೇಕಾದರೆ ಸಕ್ಷಮ ಪ್ರಾಧಿಕಾರದ ಮುಂದೆ 2 ತಿಂಗಳ ಮೊದಲೇ ಅರ್ಜಿ ಸಲ್ಲಿಸಬೇಕಾಗುತ್ತದೆ.

- Advertisement -

ಇನ್ನು ಮತಾಂತರ ಪ್ರಕ್ರಿಯೆ ಗೌಪ್ಯವಾಗಿಡುವಂತಿಲ್ಲ, ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಿ ಬಂಧಿಸುವ ಅವಕಾಶ ಇರುತ್ತದೆ. ಹೀಗೆ ಹಲವು ಅಂಶಗಳನ್ನು ಹೊಂದಿರುವ ಈ ಕಾಯ್ದೆ ವಿರುದ್ಧ ಈಗಾಗಲೇ ಹಲವರು ವಿರೋಧ ವ್ಯಕ್ತಡಿಸಿದ್ದು, ಕ್ರೈಸ್ತ ಸಮುದಾಯದ ನಿಯೋಗ ಇತ್ತೇಚೆಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಕಾಯ್ದೆ ಜಾರಿಗೊಳಿಸದಂತೆ ಮನವಿ ಮಾಡಿತ್ತು.

Join Whatsapp