ಸೂರಜ್‌ ಪ್ರಕರಣ ಗಂಭೀರವಾಗಿರುವುದೇ ಸಿಐಡಿಗೆ ನೀಡಲು ಕಾರಣ: ಜಿ. ಪರಮೇಶ್ವರ್

Prasthutha|

ಬೆಂಗಳೂರು: ಸೂರಜ್‌ ಪ್ರಕರಣ ರಾಜಕೀಯ ಪ್ರೇರಿತವೋ ಅಲ್ಲವೋ ನನಗೆ ಗೊತ್ತಿಲ್ಲ. ಪ್ರಕರಣ ಗಂಭೀರವಾಗಿರುವುದರಿಂದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು ಬಂದ ಬಳಿಕ ಪರಿಶೀಲಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.ರಾಜಕೀಯ ದುರುದ್ದೇಶವಿದೆಯೋ ಇಲ್ಲವೋ ಎನ್ನುವುದು ತನಿಖೆಯಿಂದ ಗೊತ್ತಾಗಲಿದೆ ಎಂದರು.

ಇದೇ ವಿಚಾರವಾಗಿ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯಿಸಿ, ಸೂರಜ್‌ ಬಂಧನ ವಿಚಾರ ನನಗೆ ಗೊತ್ತಿಲ್ಲ. ಯಾವುದೇ ಅಕ್ರಮ ಅಥವಾ ಅಪರಾಧ ಪ್ರಕರಣಗಳ ತನಿಖೆ ಪೊಲೀಸರ ಜವಾಬ್ದಾರಿ. ಇದರಲ್ಲಿ ನಮ್ಮ ಹೇಳಿಕೆ ಯಾಕೆ ಮಾಧ್ಯಮದವರನ್ನೇ ಪ್ರಶ್ನಿಸಿದರು.



Join Whatsapp