ಸ್ವಪಕ್ಷದವರಿಂದಲೇ ಉಗಿಸಿಕೊಂಡ ಕಂದಾಯ ಸಚಿವ; ಆರ್.ಅಶೋಕ್ ವಿರುದ್ಧ ತಿರುಗಿ ಬಿದ್ದ ಬಿಜೆಪಿಗರು

Prasthutha|

ಮಂಡ್ಯ: ಕಂದಾಯ ಸಚಿವ ಆರ್.ಅಶೋಕ್ ಅವರ ವಿರುದ್ಧ ಸ್ವಪಕ್ಷದವರೇ ತಿರುಗಿ ಬಿದ್ದಿದ್ದಾರೆ. ನಗರದಾದ್ಯಂತ ಬಿಜೆಪಿ ಪಕ್ಷದ ಚಿಹ್ನೆ ಇರುವ BOYCOTT ಆರ್. ಅಶೋಕ್ ಎಂಬ ಪೋಸ್ಟರ್ ಗಳು ರಾರಾಜಿಸುತ್ತಿವೆ.

- Advertisement -


ಮಂಡ್ಯದ ವಿವಿ ರಸ್ತೆ, ಸುಭಾಷ್ ರಸ್ತೆ ಗೋಡೆ ಮೇಲೆ ಹಾಗೂ ಜಿಲ್ಲೆಯ ಮದ್ದೂರು ಸೇರಿದಂತೆ ಹಲವಡೆ ‘ಗೋ ಬ್ಯಾಕ್ ಆರ್ .ಅಶೋಕ್’ ಎಂಬ ಭಿತ್ತಿಪತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದಂತೆ ಸಚಿವ ಗೋಪಾಲಯ್ಯರನ್ನು ಬದಲಿಸಿ ಆರ್.ಅಶೋಕ್ ಅವರನ್ನು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಕಗೊಳಿಸಲಾಗಿದ್ದು, ಸಚಿವರ ಬದಲಾವಣೆಗೆ ಇದೀಗ ಜಿಲ್ಲೆಯ ಬಿಜೆಪಿ ಮುಖಂಡರಿಂದ ಆಕ್ರೋಶ ವ್ಯಕ್ತವಾಗಿದೆ.


ಅಶೋಕ್ ಅವರು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯವರೇ ಆದ ನಾರಾಯಣ ಗೌಡರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡುವಂತೆ ಬಿಜೆಪಿ ಮುಖಡರು ಒತ್ತಾಯಿಸಿದ್ದಾರೆ.

Join Whatsapp