ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹಾನ್ ನಾಯಕರ ಪಾತ್ರದ ಬಗ್ಗೆ ಚರ್ಚೆಯಾಗಬೇಕು: ಕುಮಾರಸ್ವಾಮಿ

Prasthutha|

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹಾನ್ ನಾಯಕರ ಪಾತ್ರದ ಬಗ್ಗೆ ಚರ್ಚೆಯಾಗಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಅದರಲ್ಲೂ ವಿಶೇಷವಾಗಿ ಡಿಕೆ ಶಿವಕುಮಾರ್ ಅವರನ್ನು ದೂರಿದರು. ಪ್ರಜ್ವಲ್ ರೇವಣ್ಣನಿಂದ ತಪ್ಪಾಗಿದ್ದರೆ ಶಿಕ್ಷೆ ಆಗೇ ಆಗುತ್ತದೆ ಅದರಲ್ಲಿ ಸಂಶಯವೇ ಬೇಡ, ಪ್ರಜ್ವಲ್ ತನ್ನ ಸಹೋದರ ರೇವಣ್ಣನ ಮಗ ಅಂತ ತಾನು ಪರವಹಿಸಿಕೊಂಡು ಮಾತಾಡಲ್ಲ, ಅದರೆ ಇದರ ಹಿಂದಿನ ಮತ್ತು ಮುಂದಿನ ರಾಜಕಾರಣ ಇದೆಯಲ್ಲ ಅದರ ಬಗ್ಗೆ ಚರ್ಚೆ ನಡೆಸಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.

Join Whatsapp