ಆಸ್ಪತ್ರೆಯ ಕೊಳಕು ಹಾಸಿಗೆಯ ಮೇಲೆ ಮಲಗಿಸಿ ಅವಮಾನ; ಬಾಬಾ ಫರೀದ್ ವಿ.ವಿ ಕುಲಪತಿ ರಾಜೀನಾಮೆ

Prasthutha|

ಚಂಢೀಗಡ: ಶುಚಿತ್ವದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಕೊಳಕು ಹಾಸಿಗೆಯ ಮೇಲೆ ಆರೋಗ್ಯ ಸಚಿವ ಚೇತನ್ ಸಿಂಗ್ ಜೌರಮಜ್ರಾ ಅವರ ಬಲವಂತದ ಮೇರೆಗೆ ಮಲಗಿ, ಅವಮಾನಕ್ಕೀಡಾಗಿದ್ದ ‘ಬಾಬಾ ಫರೀದ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ’ದ ಕುಲಪತಿ ಡಾ ರಾಜ್ ಬಹದ್ದೂರ್ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಅಂಗೀಕರಿಸಿದ್ದು, ಅವರು ಅದನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ.

ಕಳೆದ ತಿಂಗಳು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಗುರು ಗೋವಿಂದ್ ಸಿಂಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪರಿಶೀಲನೆಯ ವೇಳೆ ಜೌರಮಜ್ರಾ ಅವರು ಡಾ. ರಾಜ್ ಬಹದ್ದೂರ್ ಅವರನ್ನು ಆಸ್ಪತ್ರೆಯ ಕೊಳಕು ಹಾಸಿಗೆಯ ಮೇಲೆ ಮಲಗುವಂತೆ ಬಲವಂತಪಡಿಸಿದ್ದರು.

- Advertisement -

ಈ ವೇಳೆ ಮುಜುಗರಕ್ಕೆ ಒಳಗಾಗಿದ್ದ ಕುಲಪತಿ ತಮಗಾದ ಅಪಮಾನವನ್ನು ಪಂಜಾಬ್ ಮುಖ್ಯಮಂತ್ರಿಗೆ ತಿಳಿಸಿದ್ದು, ತಮ್ಮನ್ನು ಕೆಲಸದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.

ಸದ್ಯ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಮಾಧ್ಯಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ರಾಜ್ಯ ಸರ್ಕಾರವು ಪ್ರಭಾರಿಯನ್ನಾಗಿ ನಿಯೋಜಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಘಟನೆಯ ನಂತರ ಸಚಿವರ ವಿರುದ್ಧ  ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಭಾರತೀಯ ವೈದ್ಯಕೀಯ ಸಂಘ ಸೇರಿದಂತೆ ವಿವಿಧ ವೈದ್ಯಕೀಯ ಸಂಘಟನೆಗಳು ಆರೋಗ್ಯ ಸಚಿವರರನ್ನು ಅವರ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿವೆ.

Join Whatsapp