Home ಟಾಪ್ ಸುದ್ದಿಗಳು ಅದಾನಿ ಪ್ರಕರಣದ ತನಿಖೆಗೆ 6 ಸದಸ್ಯರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

ಅದಾನಿ ಪ್ರಕರಣದ ತನಿಖೆಗೆ 6 ಸದಸ್ಯರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

ಹೊಸದಿಲ್ಲಿ: ಷೇರುಪೇಟೆಯಲ್ಲಿ ಅದಾನಿ ಗ್ರೂಪ್‌ ವಂಚನೆ ಎಸಗಿದೆ ಎಂಬ ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ನೀಡಿದ ವರದಿಯ ಸತ್ಯಾಸತ್ಯತೆ ಪರಿಶೀಲಿಸಲು ಸುಪ್ರೀಂಕೋರ್ಟ್ ಆರು ಸದಸ್ಯರ ಸಮಿತಿಯನ್ನು ರಚಿಸಿದೆ.

ಸಮಿತಿಯ ನೇತೃತ್ವವನ್ನು ನಿವೃತ್ತ ನ್ಯಾಯಮೂರ್ತಿ ಎ.ಎಂ.ಸಪ್ರ ವಹಿಸಲಿದ್ದಾರೆ.

ಸಮಿತಿಯಲ್ಲಿ ಸೆಬಿಯ ಮಾಜಿ ಅಧ್ಯಕ್ಷ ಒ.ಪಿ. ಭಟ್‌, ಬಾಂಬೆ ಹೈಕೋರ್ಟ್‌ನ ನಿವೃತ್ತ ನ್ಯಾ| ಜೆ.ಪಿ. ದೇವಧರ್‌, ಕನ್ನಡಿಗರಾಗಿರುವ ಬ್ಯಾಂಕರ್‌ ಕೆ.ವಿ. ಕಾಮತ್‌, ಭಾರತದ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಂದನ್‌ ನಿಲೇಕಣಿ, ಷೇರು ಪೇಟೆಯ ವಿಚಾರಗಳ ಪರಿಣತ ಮತ್ತು ನ್ಯಾಯವಾದಿ ಸೋಮಶೇಖರನ್‌ ಸುಂದರೇಶನ್‌ ಇರಲಿದ್ದಾರೆ ಎಂದು ಸಿಜೆಐ ನೇತೃತ್ವದ ನ್ಯಾಯಪೀಠ ಹೇಳಿದೆ.

ನಿವೃತ್ತ ನ್ಯಾಯಮೂರ್ತಿ ಸಪ್ರ ನೇತೃತ್ವದ ಸಮಿತಿಗೆ ಕೇಂದ್ರ ಸರಕಾರ, ಕೇಂದ್ರ ವಿತ್ತ ಸಚಿವಾಲಯ, ಸೆಬಿ ಸೇರಿದಂತೆ ಎಲ್ಲ ಕಾನೂನಾತ್ಮಕ ಸಂಸ್ಥೆಗಳು ಅಗತ್ಯ ಸಹಕಾರ ನೀಡುವಂತೆಯೂ ನ್ಯಾಯಪೀಠ ಸೂಚಿಸಿದೆ.

Join Whatsapp
Exit mobile version