ತೂಗುಸೇತುವೆ ದುರಂತ; ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಬಿನೋಯ್‌ ವಿಶ್ವಂ

Prasthutha|

ನವದೆಹಲಿ: ‘ಪಶ್ಚಿಮ ಗುಜರಾತ್‌ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗುಸೇತುವೆ ಕುಸಿಯಲು ಆಡಳಿತಾರೂಢ ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ’ ಎಂದು ಸಿಪಿಐ ರಾಜ್ಯಸಭಾ ಸದಸ್ಯ ಬಿನೋಯ್‌ ವಿಶ್ವಂ ಟೀಕಿಸಿದ್ದಾರೆ.

- Advertisement -

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ‘ಆರು ತಿಂಗಳ ಕಾಲ ಸೇತುವೆಯ ನವೀಕರಣ ಕಾರ್ಯ ಕೈಗೊಳ್ಳಲಾಗಿತ್ತು ಎಂದು ಹೇಳಲಾಗಿದೆ. ನಾಲ್ಕು ದಿನಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ಮುಕ್ತವಾಗಿದ್ದ ಈ ಸೇತುವೆ ಮುರಿದು ಬಿದ್ದಿರುವುದಕ್ಕೆ ಕಳಪೆ ಕಾಮಗಾರಿಯೇ ಕಾರಣ. ಸರ್ಕಾರವು ಮೃತರ ಕುಟುಂಬಗಳಿಗೆ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಬೇಕು. ಈ ಕುರಿತು ಸೂಕ್ತ ತನಿಖೆ ನಡೆಸಬೇಕು. ಈ ನಿರ್ಲಕ್ಷ್ಯದಲ್ಲಿ ರಾಜಕಾರಣಿಗಳ ಪಾತ್ರದ ಕುರಿತೂ ತನಿಖೆಯಾಗಬೇಕು’ ಎಂದು ಒತ್ತಾಯಿಸಿದ್ದಾರೆ.

Join Whatsapp