Home ಟಾಪ್ ಸುದ್ದಿಗಳು ಈಜಲು ಹೋದ ಮೂವರು ಬಾಲಕರು ನೀರುಪಾಲು !

ಈಜಲು ಹೋದ ಮೂವರು ಬಾಲಕರು ನೀರುಪಾಲು !

ಜಗಳೂರು: ಈಜಲು ಹೋಗಿದ್ದ  ಮೂವರು ಬಾಲಕರು ನೀರಲ್ಲಿ ಮುಳುಗಿ  ಸಾವನ್ನಪ್ಪಿದ ಘಟನೆ ಜಗಳೂರುನಲ್ಲಿ ಶನಿವಾರ ನಡೆದಿದ್ದು, ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಕೆರೆಯಿಂದ ಮೇಲೆತ್ತಲಾಗಿದೆ.

ಶೇಖಾವತ್ ಅವರ ಪುತ್ರರಾದ ಆಶಿಕ್ (10), ಅಫ್ರಾನ್‌ (8) ಹಾಗೂ ಅಬ್ದುಲ್ ಅವರ ಪುತ್ರ ಸೈಯದ್ ಫೈಜಾನ್ (9) ನೀರುಪಾಲದ ಬಾಲಕರು ಎಂದು ಗುರುತಿಸಲಾಗಿದೆ.

ಆಟವಾಡಲೆಂದು ಹೋಗಿದ್ದ ಬಾಲಕರು ರಾತ್ರಿಯಾದರೂ ವಾಪಸ್ ಆಗದಿದ್ದಾಗ ಅನುಮಾನಗೊಂಡ ಪೋಷಕರು ಹುಟುಕಾಟ ನಡೆಸಿದ್ದು, ಈ ವೇಳೆ ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

 ಈ ಕುರಿತು ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version