ಕಬರ್ ಸ್ಥಾನದಲ್ಲಿದ್ದ ತಾಯಿ, ಮಗುವಿನ ಮೃತದೇಹ ಕಳ್ಳತನ: ಇಬ್ಬರ ವಿರುದ್ಧ ಪ್ರಕರಣ ದಾಖಲು

Prasthutha|

ಕೋಲಾರ: ಕಬರ್ ಸ್ಥಾನದಲ್ಲಿದ್ದ ತಾಯಿ, ಮಗುವಿನ ಮೃತದೇಹವನ್ನು ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೆಬ್ಬಟ ಕ್ರಾಸ್ನಲ್ಲಿ ಈ ಘಟನೆ ನಡೆದಿದೆ.
ಕಳೆದ 20 ದಿನಗಳ ಹಿಂದೆ ಮೂರುವರೆ ವರ್ಷದ ಮಗುವಿನೊಂದಿಗೆ ಮಹಿಳೆ ಹಮಿದ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರ ಇಬ್ಬರ ಶವವನ್ನು ಹೆಬ್ಬಟ ಕ್ರಾಸ್ ನ ಕಬರ್ ಸ್ಥಾನದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿತ್ತು. ನವೆಂಬರ್ 19 ರಂದು ಶವಗಳನ್ನು ಹೊರತೆಗೆದು ಕೂದಲು ಹಾಗೂ ಮಗು ಧರಿಸಿದ್ದ ಬಟ್ಟೆ ತೆಗೆದುಕೊಂಡಿದ್ದಾರೆ ಎಂದು ಮೃತ ಹಮಿದ ಪೋಷಕರು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ.


ತಾಯಿ ಹಾಗೂ ಮಗಳ ಶವವನ್ನು ಸ್ಮಶಾನಕ್ಕೆ ತೆರಳಿ ಹೊರತೆಗೆದಿದ್ದಾರೆಂದು ಶ್ರೀರಾಮ್ ಹಾಗೂ ನಾರಾಯಣಸ್ವಾಮಿ ಎನ್ನುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

- Advertisement -


ನವೆಂಬರ್ 19 ರಂದು ಬೆಳ್ಳಂಬೆಳಗ್ಗೆ ಇಬ್ಬರು ಸ್ಮಶಾನಕ್ಕೆ ತೆರಳಿ, ತಡವಾಗಿ ವಾಪಸ್ ಆಗಿದ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.



Join Whatsapp