BJPಯಲ್ಲಿ ಮುಸ್ಲಿಮರಿಗೆ ಅವಕಾಶ ಕಲ್ಪಿಸುವ ಅಗತ್ಯವಿದೆ: ಭಾಸ್ಕರ್ ರಾವ್

Prasthutha|

‘ವಸುದೈವ ಕುಟುಂಬಕಂ ಬಿಜೆಪಿ ಮಂತ್ರವಾಗಬೇಕು’

- Advertisement -


ಬೆಂಗಳೂರು: ಬಿಜೆಪಿಯಲ್ಲಿ ಮುಸ್ಲಿಮರಿಗೆ ಅವಕಾಶ ಕಲ್ಪಿಸುವ ಅಗತ್ಯವಿದೆ. ‘ವಸುದೈವ ಕುಟುಂಬಕಂ ಬಿಜೆಪಿ ಮಂತ್ರವಾಗಬೇಕು’ ಎಂದು ಬಿಜೆಪಿ ನಾಯಕ ಭಾಸ್ಕರ್ ರಾವ್ ಹೇಳಿದ್ದಾರೆ.

2024 ರ ಲೋಕಸಭಾ ಚುನಾವಣೆಯು ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹಲವು ಸಭೆಗಳನ್ನು ನಡೆಸುತ್ತಿದೆ. ಇತ್ತೀಚೆಗೆ ನಡೆದ ಬಿಜೆಪಿ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಭಾಗವಹಿಸಿದ್ದರು. ಈ ವೇಳೆ ಮಾಜಿ ಪೊಲೀಸ್ ಅಧಿಕಾರಿ ಮತ್ತು ಬಿಜೆಪಿ ನಾಯಕ ಭಾಸ್ಕರ್ ರಾವ್ ಅವರು ಪಕ್ಷವು ಮುಸ್ಲಿಮರನ್ನು ಜೊತೆಗೆ ಕರೆದೊಯ್ಯಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

- Advertisement -


ಸರ್ವಜ್ಞನಗರ, ಪುಲಕೇಶಿನಗರ, ಶಿವಾಜಿನಗರ, ಬಿಟಿಎಂ ಲೇಔಟ್, ಶಾಂತಿನಗರ ಮತ್ತು ಗಾಂಧಿನಗರದಂತಹ ಕಾಂಗ್ರೆಸ್ ಮತ್ತು ಜೆಡಿಎಸ್ ಭದ್ರಕೋಟೆಗಳನ್ನು ಕಿತ್ತೊಗೆಯಲು ವಿಶೇಷ ಕಾರ್ಯನಿರ್ವಹಣೆಯೊಂದಿಗೆ ಪಕ್ಷಕ್ಕೆ ವಿಶೇಷ ಪ್ರಧಾನ ಕಾರ್ಯದರ್ಶಿ ಮಟ್ಟದ ಪದಾಧಿಕಾರಿ ಇರಬೇಕು ಎಂದು ರಾವ್ ಸಲಹೆ ನೀಡಿದರು. ಈ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯರ್ತರು ಇದ್ದರೂ, ಪಕ್ಷದ ಮತಗಳಿಕೆಯನ್ನು ಹೆಚ್ಚಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದರು.

Join Whatsapp