ಸದ್ಯಕ್ಕೆ ಪ್ರಾಥಮಿಕ ಶಾಲೆಗಳ ಆರಂಭ ಇಲ್ಲ: ಸಚಿವ ಸುಧಾಕರ್

Prasthutha|

ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಕೇರಳದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಗಣೇಶ ಹಬ್ಬ ಕೂಡ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸದಿರಲು ರಾಜ್ಯ ಸರ್ಕಾರ ತಿಳಿಸಿದೆ.

- Advertisement -

ಈ ಕುರಿತು ಮಾತನಾಡಿರುವ ಸಚಿವ ಡಾ.ಸುಧಾಕರ್, ಸದ್ಯ 6-8ನೇ ತರಗತಿಗಳನ್ನು ಟ್ರಯಲ್ ಆಗಿ ಆರಂಭಿಸುತ್ತಿದ್ದೇವೆ. ಪ್ರಾಥಮಿಕ ಶಾಲೆಗಳಾದ 1ರಿಂದ 5ನೇ ತರಗತಿ ತೆರೆಯಲು ಪ್ರಸ್ತುತ ಚಿಂತನೆ ಇಲ್ಲ. ಸದ್ಯಕ್ಕೆ ಪ್ರಾಥಮಿಕ ಶಾಲೆ ತೆರೆಯುವುದು ಬೇಡ ಎಂದು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

6-8ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಸೆ.6ರಿಂದ ನಿಯಮಾನುಸಾರ ಅವಕಾಶ ಕಲ್ಪಿಸಲು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದೆ. ಕೊವಿಡ್ ಪಾಸಿಟಿವಿಟಿ ದರ ಶೇಕಡಾಗಿಂತ 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರವಷ್ಟೇ ಶಾಲೆಗಳನ್ನು ಆರಂಭಿಸಲು ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

Join Whatsapp