2024ರಲ್ಲಿ ದೇಶದ ಭವಿಷ್ಯವನ್ನು 5 ರಾಜ್ಯಗಳು ನಿರ್ಧರಿಸಲಿವೆ: ಸಂಜಯ್ ರಾವುತ್

Prasthutha|

ಮುಂಬಯಿ : 2024ರ ಲೋಕಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕರ್ನಾಟಕ, ಬಿಹಾರ ಮತ್ತು ಆಂಧ್ರಪ್ರದೇಶ ರಾಜ್ಯಗಳು ದೇಶದ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಶಿವಸೇನೆ (ಯುಬಿಟಿ) ರಾಜ್ಯಸಭಾ ಸಂಸದ ಸಂಜಯ್ ರಾವತ್ ಶುಕ್ರವಾರ ಹೇಳಿದ್ದಾರೆ.

- Advertisement -

ಕಾರ್ಯಕ್ರಮವೊಂದರಲ್ಲಿ ಸಂದರ್ಶನ ನೀಡಿದ ಅವರು, ”2024 ರ ನಂತರ ದೇಶದಲ್ಲಿ ಖಂಡಿತವಾಗಿಯೂ ಅಧಿಕಾರ ಬದಲಾವಣೆಯಾಗಲಿದೆ. ನಾನು ಇದನ್ನು ಅತ್ಯಂತ ಆತ್ಮವಿಶ್ವಾಸದಿಂದ ಹೇಳಬಲ್ಲೆ” ಎಂದರು.

ಬಿಜೆಪಿಯ ಆಡಳಿತ ವೈಫಲ್ಯಗಳಿಂದ ಬೇಸತ್ತ ಜನತೆ ಅಧಿಕಾರ ಬದಲಾವಣೆ ಮಾಡಲಿದ್ದಾರೆ. ಹಿಂದೂ-ಮುಸ್ಲಿಂ ಗಲಭೆಗಳನ್ನು ಪ್ರಚೋದಿಸುತ್ತಿರುವುದು ಬಿಜೆಪಿಯ ನಿಜವಾದ ಶಕ್ತಿ ಮತ್ತು ಚುನಾವಣಾ ಲಾಭಕ್ಕಾಗಿ ಬಿಜೆಪಿ ಇದನ್ನೆಲ್ಲಾ ಮಾಡುತ್ತಿದೆ ಎಂದು ಸಂಜಯ್ ರಾವುತ್ ಆರೋಪಿಸಿದ್ದಾರೆ.

Join Whatsapp