Home ಟಾಪ್ ಸುದ್ದಿಗಳು ನಾಳೆ ಬೆಂಗಳೂರಿನಲ್ಲಿ ಯಾವುದೇ ಶಾಲಾ-ಕಾಜೇಜುಗಳಿಗೆ ರಜೆಯಿಲ್ಲ: ಡಿಸಿ ದಯಾನಂದ್

ನಾಳೆ ಬೆಂಗಳೂರಿನಲ್ಲಿ ಯಾವುದೇ ಶಾಲಾ-ಕಾಜೇಜುಗಳಿಗೆ ರಜೆಯಿಲ್ಲ: ಡಿಸಿ ದಯಾನಂದ್

ಬೆಙಗಳೂರು: ಇಂದು ನಗರದ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಮಕ್ಕಳ ಸುರಕ್ಷತೆಯ ಸಲುವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆದರೆ ನಾಳೆ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ದಯಾನಂದ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಇಂದು ಬೆಂಗಳೂರಿನ 60 ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದಿತ್ತು. ಈ ಕಾರಣದಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು ಎಂದರು. ಬಾಂಬ್ ಬೆದರಿಕೆ ಇ-ಮೇಲ್ ಕಾರಣ ನಗರದ ಶಾಲಾ-ಕಾಲೇಜುಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಿ, ಸಾಕಷ್ಟು ಕ್ರಮ ಕೈಗೊಂಡಿದ್ದಾರೆ. ಬೆದರಿಕೆ ಸಂದೇಶದಲ್ಲಿ ಯಾವುದೇ ಗಂಭೀರತೆ ಕಾಣುತ್ತಿಲ್ಲ. ಆದ್ದರಿಂದ ನಾಳೆ ಬೆಂಗಳೂರಿನ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂಬುದಾಗಿ ತಿಳಿಸಿದ್ದಾರೆ.

Join Whatsapp
Exit mobile version