ಮಾತುಕತೆ ವಿಫಲ, ಗೋವಾದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಸಂಜಯ್ ರಾವತ್

Prasthutha|

ಗೋವಾ: ಮುಂಬರುವ ಮಹತ್ವದ ಪಂಚರಾಜ್ಯ ಚುನಾವಣೆಗಳಲ್ಲಿ ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ ಮಾದರಿಯಲ್ಲಿ ಗೋವಾದಲ್ಲೂ ಕಣಕ್ಕಿಳಿಯಲು ನಿರ್ಧರಿಸಿದ್ದ ಶಿವಸೇನೆ-ಕಾಂಗ್ರೆಸ್ ನಡುವಿನ ಮಾತುಕತೆ ವಿಫಲವಾಗಿದ್ದು, ಎನ್’ಸಿಪಿ ಜೊತೆ ಮೈತ್ರಿಮಾಡಿಕೊಂಡು ಸ್ಪರ್ಧಿಸಲು ಶಿವಸೇನೆ ನಿರ್ಧರಿಸಿದೆ.

- Advertisement -

ಈ ಕುರಿತು ತಮ್ಮ ನಿರ್ಧಾರ ಪ್ರಕಟಿಸಿರುವ ಶಿವಸೇನೆ ಮುಖಂಡ ಸಂಜಯ್ ರಾವತ್, ‘ ಗೋವಾದಲ್ಲಿ ಮೈತ್ರಿ ಕುರಿತಂತೆ ಕಾಂಗ್ರೆಸ್ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಲಾಯಿತಾದರೂ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಶಿವಸೇನೆ-ಎನ್’ಸಿಪಿ ಹಾಗೂ ಕಾಂಗ್ರೆಸ್ ಜೊತೆಯಾಗಿ ಮಹರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ ಮಾದರಿಯಲ್ಲಿ ಗೋವಾದಲ್ಲಿ ಚುನಾವಣೆ ಎದುರಿಸಲು ಸಜ್ಜಾಗಿತ್ತು. ಆದರೆ ಕಾಂಗ್ರೆಸ್ ಏಕಾಂಗಿಯಾಗಿ ಗೋವಾ ರಾಜ್ಯದಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಕಾರಣ ಮೈತ್ರಿಗೆ ಮುಂದಾಗಿಲ್ಲ ಎಂದು ರಾವತ್ ಹೇಳಿದ್ದಾರೆ.  

ಕಾಂಗ್ರೆಸ್ ಹೊರತಾಗಿಯೂ ಶಿವಸೇನೆ ಎನ್’ಸಿಪಿ ಜೊತೆ ಮೈತ್ರಿಮಾಡಿಕೊಂಡು ಗೋವಾದಲ್ಲಿ ಸ್ಪರ್ಧಿಸುವ ಕುರಿತು ಜನವರಿ 16ರಂದು ನಡೆದ ಉಭಯ ಪಕ್ಷಗಳ ನಾಯಕರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.

Join Whatsapp