Home ಟಾಪ್ ಸುದ್ದಿಗಳು ದೇವಾಲಯಗಳಿಗೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಹುಂಡಿ ಇಟ್ಟುಬಿಡಲಿ: ಬಿ.ವೈ. ವಿಜಯೇಂದ್ರ

ದೇವಾಲಯಗಳಿಗೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಹುಂಡಿ ಇಟ್ಟುಬಿಡಲಿ: ಬಿ.ವೈ. ವಿಜಯೇಂದ್ರ

ಮೈಸೂರು: ದೇವಾಲಯಗಳಿಗೆ ಕನ್ನ ಹಾಕಲು ಸರ್ಕಾರ ಮುಂದಾಗಿದೆ. ಇದರ ಬದಲಿಗೆ ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟು ಬಿಡಲಿ. ದಾನಿಗಳು ಅಲ್ಲಿಗೇ ಬಂದು ದಾನ ಮಾಡುತ್ತಾರೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದ ದುರಾಡಳಿತದಿಂದಾಗಿ ಸರ್ಕಾರಿ ನೌಕರರಿಗೆ ಸಂಬಳವನ್ನೂ ಕೊಡಲು ಕಷ್ಟವಾಗುವ ಸ್ಥಿತಿ ಬಂದಿದೆ ಎಂದು ಆರೋಪಿಸಿದರು. ‘224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಒಂದು ರೂಪಾಯಿ ಅನುದಾನವನ್ನೂ ಸರ್ಕಾರ ಕೊಟ್ಟಿಲ್ಲ’ ಎಂದು ದೂರಿದರು.

Join Whatsapp
Exit mobile version