ಚುನಾವಣೆಗೂ ಮುನ್ನ ನನ್ನ ಬಂಧನಕ್ಕೆ ಷಡ್ಯಂತ್ರ ರೂಪಿಸಲಾಗುತ್ತಿದೆ: ತನ್ನ ಮೇಲಿನ ಪ್ರಕರಣದ ವಿರುದ್ಧ ಡಿಕೆಶಿ ನ್ಯಾಯಾಲಯದ ಮೊರೆ

Prasthutha|

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ವಿರುದ್ಧ ಇಡಿ ತನಿಖೆ ಆರಂಭಿಸಿರುವುದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ದೆಹಲಿ ಹೈಕೋರ್ಟ್ ಇಡಿಗೆ ನೋಟಿಸ್ ಜಾರಿಗೊಳಿಸಿ ಆದೇಶ ನೀಡಿದೆ.

- Advertisement -

ನ್ಯಾಯಮೂರ್ತಿ ಮುಕ್ತಾ ಗುಪ್ತಾ ಮತ್ತು ನ್ಯಾಯಮೂರ್ತಿ ಅನೀಶ್ ದಯಾಳ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 15ರಂದು ನಿಗದಿ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸುವಂತೆ ಇಡಿಗೆ ದೆಹಲಿ ಹೈಕೋರ್ಟ್ ನೋಟಿಸ್’ನಲ್ಲಿ ಸೂಚಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

2020ರಲ್ಲಿ ತನ್ನ ವಿರುದ್ಧದ ಪ್ರಕರಣದಲ್ಲಿ ಸಮನ್ಸ್ ಜಾರಿ ಸೇರಿದಂತೆ ಸಂಪೂರ್ಣ ತನಿಖೆಯನ್ನೇ ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

Join Whatsapp