Home ಟಾಪ್ ಸುದ್ದಿಗಳು ಇನ್ನು ಮುಂದೆ ಮುಸ್ಲಿಮರನ್ನು ಕಣಕ್ಕೆ ಇಳಿಸುವ ಮೊದಲು ಆಲೋಚಿಸಬೇಕಾಗುತ್ತದೆ: ಮಾಯಾವತಿ

ಇನ್ನು ಮುಂದೆ ಮುಸ್ಲಿಮರನ್ನು ಕಣಕ್ಕೆ ಇಳಿಸುವ ಮೊದಲು ಆಲೋಚಿಸಬೇಕಾಗುತ್ತದೆ: ಮಾಯಾವತಿ

ಲಖನೌ: ಮುಸ್ಲಿಂ ಸಮುದಾಯದವರು ನಮ್ಮ ಪಕ್ಷವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲಿಲ್ಲ. ಇನ್ನು ಮುಂದೆ ಮುಸ್ಲಿಮರನ್ನು ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಸುವ ಮೊದಲು ತುಂಬಾ ಆಲೋಚಿಸಬೇಕಾಗುತ್ತದೆ ಎಂದು ಎಂದು ಉ.ಪ್ರ. ಮಾಜಿ ಸಿಎಂ ಹಾಗೂ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.

ಈ ಸಲದ ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಅತ್ಯಧಿಕವಾದ 35 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಆದರೆ ಒಂದು ಸ್ಥಾನವನ್ನೂ ಗೆಲ್ಲಲಿಲ್ಲ. ಈ ಕುರಿತು ಮಾಯಾವತಿ ಹೀಗೆ ಪ್ರತಿಕ್ರಿಯಿಸಿದ್ದಾರೆ.

ಮುಸ್ಲಿಮರಿಗೆ ಉತ್ತಮ ಪ್ರಾತಿನಿಧ್ಯ ನೀಡಿದ ಹೊರತಾಗಿಯೂ ಆ ಸಮುದಾಯದ ಮತದಾರರು ಬಿಎಸ್‌ಪಿಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ದಲಿತರು, ಅದರಲ್ಲೂ ಜಾಟವ ಸಮುದಾಯದವರು ಉತ್ತಮ ರೀತಿಯಲ್ಲಿ ಸ್ಪಂದಿಸಿದರು. ಅವರಿಗೆ ಕೃತಜ್ಞಳಾಗಿದ್ದೇನೆ ಎಂದರು.

ಬಿಸಿಲು ಹೆಚ್ಚಾಗಿರುವ ಸಂದರ್ಭದಲ್ಲಿ ಹಾಗೂ ಏಳು ಹಂತಗಳಲ್ಲಿ ಮತದಾನ ನಡೆಸುವ ಕ್ರಮ ಸರಿಯಲ್ಲ ಎಂದು ಅಭಿಪ್ರಾಯಪಟ್ಟ ಅವರು, ಮೂರ್ನಾಲ್ಕು ಹಂತಗಳಲ್ಲೇ ಮತದಾನ ನಡೆಯಲು ಅವಕಾಶ ನೀಡಬೇಕು ಎಂದೂ ಪ್ರತಿಕ್ರಿಯಿಸಿದರು.

Join Whatsapp
Exit mobile version