ತೀರ್ಥಹಳ್ಳಿ: ಬೇಟೆಗೆ ತೆರಳಿದ್ದ ಬಿಜೆಪಿ ಮುಖಂಡ ಗುಂಡೇಟು ತಗುಲಿ ಸಾವು

Prasthutha|

ತೀರ್ಥಹಳ್ಳಿ: ಕಾಡಿಗೆ ಬೇಟೆಗೆಂದು ತೆರಳಿದ್ದ ಬಿಜೆಪಿ ಮುಖಂಡನೊಬ್ಬ ಗುಂಡು ತಗುಲಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಮೃತನನ್ನು ಮೇಲಿನಕೊಪ್ಪ ಬಿಜೆಪಿ ಮುಖಂಡ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕಾಂತರಾಜ್‌ (44) ಎಂದು ಗುರುತಿಸಲಾಗಿದೆ.

- Advertisement -

ಕಾಡಿನಲ್ಲಿ ಬೇಟೆಯಾಡುತ್ತಿದ್ದ ವೇಳೆ ಬಂದೂಕಿನಿಂದ ಹಾರಿದ ಗುಂಡಿಗೆ ಕಾಂತರಾಜು ಗಂಭೀರವಾಗಿ ಗಾಯಗೊಂಡಿದ್ದರು ಎಂದು ಹೇಳಲಾಗಿದ್ದು, ಅಂಬುತೀರ್ಥ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಕಾಂತರಾಜ್‌ ನೋವಿನಿಂದ ಚೀರಾಡುತ್ತಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಈ ವೇಳೆ ದಾರಿ ಮಧ್ಯೆ ಕಾಂತರಾಜ್‌ ಕೊನೆಯುಸಿರೆಳೆದಿದ್ದಾರೆ ಎಂದು‌ ತಿಳಿದು ಬಂದಿದೆ.

ಇನ್ನು ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಜೆಸಿ ಆಸ್ಪತ್ರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿದರು.ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಅಂತಿ‌ಮ ದರ್ಶನ ಪಡೆದುಕೊಂಡರು.



Join Whatsapp