Home ಟಾಪ್ ಸುದ್ದಿಗಳು ಒಬ್ಬ ಸಾಮಾನ್ಯ ಪ್ರಜೆ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಇದೇ ಉದಾಹರಣೆ: ದೂರುದಾರ ಸ್ನೇಹಮಹಿ

ಒಬ್ಬ ಸಾಮಾನ್ಯ ಪ್ರಜೆ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಇದೇ ಉದಾಹರಣೆ: ದೂರುದಾರ ಸ್ನೇಹಮಹಿ

ಚಾಮರಾಜನಗರ: ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಎಸ್ ಪಿ ಕಚೇರಿಯಲ್ಲಿ ಎಫ್ ಐಆರ್ ದಾಖಲಾಗಿದೆ.


ಈ ಬಗ್ಗೆ ಮಾತನಾಡಿದ ದೂರುದಾರ ಸ್ನೇಹಮಹಿ, ಒಬ್ಬ ಸಾಮಾನ್ಯ ಪ್ರಜೆ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಇದೇ ಉದಾಹರಣೆ ಎಂದು ಹೇಳಿದ್ದಾರೆ.


ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಹಿ ಕೃಷ್ಣ, ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್ ಐಆರ್ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ ಎಂದು ಹೇಳಿದ್ದಾರೆ.

Join Whatsapp
Exit mobile version