Home ಟಾಪ್ ಸುದ್ದಿಗಳು ಇದೇ ನನ್ನ ಕೊನೆಯ ಚುನಾವಣೆ: ಸಿದ್ದರಾಮಯ್ಯ

ಇದೇ ನನ್ನ ಕೊನೆಯ ಚುನಾವಣೆ: ಸಿದ್ದರಾಮಯ್ಯ

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಮಾಜಿ ಸಿಎಂ, ಮುಂದಿನ ಚುನಾವಣೆಗೆ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ತೀರ್ಮಾನ ಮಾಡಿಲ್ಲ, ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಕ್ಷೇತ್ರದ ಜನರು ಸ್ಪರ್ಧಿಸುವಂತೆ ಕೋರಿದ್ದಾರೆ, ಆದರೆ ಈ ಬಗ್ಗೆ ತೀರ್ಮಾನ ಮಾಡಿಲ್ಲ, ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.

ನನಗೆ ರಾಜಕೀಯ ಪುನರ್ ಜನ್ಮ ನೀಡಿದ ಕ್ಷೇತ್ರದಲ್ಲಿಯೇ ನನ್ನನ್ನು ಸೋಲಿಸಿದರು. ಆದರೆ ಈ ಬಗ್ಗೆ ಬೇಸರಿಸುವುದಿಲ್ಲ. ಐದು ಬಾರಿ ಚಾಮುಂಡೇಶ್ವರಿಯಲ್ಲಿ ಗೆದ್ದಿದ್ದೇನೆ, ಆ ಚಾಮುಂಡೇಶ್ವರಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಮುಂದಿನ ಚುನಾವಣೆಯ ಬಳಿಕ ಚುನಾವಣಾ ರಾಜಕಾರಣ ಮಾಡಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ ಎಂದು ಹೇಳಿದರು.

Join Whatsapp
Exit mobile version