ಇದು ಬರಿ ಪುಸ್ತಕವಲ್ಲ, ಬಡವರ ಧ್ವನಿ: ರಾಹುಲ್ ಗಾಂಧಿ

Prasthutha|

ಚಂಡೀಗಢ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಪುನರುಚ್ಚರಿಸಿದ್ದಾರೆ. ಲೂಧಿಯಾನದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಸಂವಿಧಾನ ರಕ್ಷಣೆಯ ಚುನಾವಣೆ ಆಗಿದೆ ಎಂದು ಹೇಳಿದ್ದಾರೆ.

- Advertisement -


‘ಇದೇ ಮೊದಲ ಬಾರಿಗೆ ಪಕ್ಷವೊಂದು ಚುನಾವಣೆಯಲ್ಲಿ ಗೆದ್ದರೆ ಸಂವಿಧಾನವನ್ನು ರದ್ದುಗೊಳಿಸುವುದಾಗಿ ಹೇಳುತ್ತಿದೆ. ಆದರೆ ಸಂವಿಧಾನದ ರಕ್ಷಣೆಗೆ ಕಾಂಗ್ರೆಸ್ ಹೋರಾಡಲಿದೆ’ ಎಂದು ಹೇಳಿದ್ದಾರೆ.
ಸಂವಿಧಾನದ ಪ್ರತಿಯನ್ನು ಹಿಡಿದು ಮಾತನಾಡಿದ ಅವರು ‘ಇದು ಬರಿ ಪುಸ್ತಕವಲ್ಲ, ಬಡವರ ಧ್ವನಿ’ ಎಂದು ಹೇಳಿದ್ದಾರೆ.

Join Whatsapp