ನನ್ನನ್ನು ಭೇಟಿಯಾಗಲು ಬರುವವರು ಆಧಾರ್ ಕಾರ್ಡ್ ತರಬೇಕು: ಕಂಗನಾ ರಣಾವತ್

Prasthutha|

ನವದೆಹಲಿ: ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಸಂಸದರಾಗಿ ಆಯ್ಕೆಯಾಗಿರುವ ನಟಿ ಕಂಗನಾ ರಣಾವತ್ ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತೆಗೆದುಕೊಂಡು ಬರಬೇಕು ಎಂದು ಹೇಳಿದ್ದು ಇದೀಗ ವಿವಾದ ಹುಟ್ಟುಹಾಕಿದೆ. ನನ್ನ ಕ್ಷೇತ್ರದ ಜನರು ನನ್ನನ್ನು ಯಾವುದೇ ಕಾರಣಕ್ಕೆ ಭೇಟಿಯಾಗಲು ಬಯಸಿದರೆ ಅವರು ಆಧಾರ್ ಕಾರ್ಡ್ ತರಬೇಕು ಎಂದು ಹೇಳಿದ್ದಾರೆ.

- Advertisement -

ಮಂಡಿ ಲೋಕಸಭಾ ಕ್ಷೇತ್ರದ ಜನರು ನನ್ನನ್ನು ಭೇಟಿ ಮಾಡಲು ಬಯಸಿದರೆ, ಅವರು ಆಧಾರ್ ಕಾರ್ಡ್ ತಂದರೆ ಒಳ್ಳೆಯದು ಏಕೆಂದರೆ ಅವರು ಮಂಡಿ ಸಂಸದೀಯ ಕ್ಷೇತ್ರದವರೇ ಅಥವಾ ಬೇರೆ ಜನರಿರಬಹುದಾ ಎಂಬುದು ತಿಳಿಯುತ್ತದೆ ಎಂದು ಕಂಗನಾ ಹೇಳಿದ್ದಾರೆ.


ಮಂಡಿಯಿಂದ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಯಾಗಿದ್ದ ಮತ್ತು ಪ್ರಸ್ತುತ ಹಿಮಾಚಲ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿರುವ ವಿಕ್ರಮಾದಿತ್ಯ ಸಿಂಗ್, ಜನಪ್ರತಿನಿಧಿಯೊಬ್ಬರು ತಮ್ಮ ಸಂಸದೀಯ ಕ್ಷೇತ್ರದ ಜನರಿಗೆ ಬೇಕಾದರೆ ಬರಲಿ ಎಂದು ಹೇಳುವುದು ಉತ್ತಮ ನಡವಳಿಕೆಯಲ್ಲ ಎಂದು ಹೇಳಿದರು.



Join Whatsapp