2022-23ರಲ್ಲಿ ಪದವಿ ಪಡೆದವರಿಗೆ ತಿಂಗಳಿಗೆ 3000 ರೂ.: 24 ತಿಂಗಳವರೆಗೆ ಕೆಲಸ ಸಿಗದಿದ್ದರೆ ಈ ಸೌಲಭ್ಯ ಅನ್ವಯ

Prasthutha|

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿ ಘೋಷಣೆ ಮಾಡಿರುವ ಗ್ಯಾರಂಟಿಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

- Advertisement -


ಯುವ ನಿಧಿ ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ.
ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದ ವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂ. ನೀಡಲಾಗುತ್ತದೆ. ಅಷ್ಟರೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. 24 ತಿಂಗಳ ಒಳಗೆ ಉದ್ಯೋಗ ಸಿಕ್ಕರೆ ಈ ಯೋಜನೆ ರದ್ದಾಗುತ್ತದೆ. ಯುವಕ, ಯುವತಿ ಹಾಗೂ ತೃತೀಯ ಲಿಂಗಿಗಳಿಗೂ ಈ ಯೋಜನೆ ಅನ್ವಯ ಆಗಲಿದೆ.


ಕೋರ್ಸ್ ಮುಗಿಸಿ 180 ದಿನಗಳಾದರೂ ಕೆಲಸ ಸಿಗದ ನಿರುದ್ಯೋಗಿಗಳಾಗಿರಬೇಕು. ವಯಸ್ಸಿನ ಮಿತಿ 18-25 ವರ್ಷದೊಳಗಿನ ನಿರುದ್ಯೋಗಿಗಳಿಗೆ ಈ ಯೋಜನೆ ಅನ್ವಯಗೊಳ್ಳಲಿದೆ. ಅರ್ಜಿ ಸ್ವೀಕಾರಗೊಂಡ ದಿನದಿಂದ 24 ತಿಂಗಳು ಯುವನಿಧಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Join Whatsapp