ಸ್ವಂತ ಬಿಸಿನೆಸ್ ಆರಂಭಿಸುವವರಿಗೆ ಸಿಗಲಿದೆ 20 ಲಕ್ಷ ರೂ.; ಬಜೆಟ್’ನಲ್ಲಿ ಘೋಷಣೆ

Prasthutha|

ನವದೆಹಲಿ: ಸ್ವಂತ ವ್ಯವಹಾರ ಆರಂಭಿಸುವ ಕನಸು ಕಂಡಿದ್ದವರಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಣಕಾಸಿನ ಸಹಾಯದ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.

- Advertisement -

ಮುದ್ರಾ ಯೋಜನೆಯಡಿ ನೀಡಲಾಗುತ್ತಿದ್ದ ಮೊತ್ತವನ್ನು 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ ಏರಿಕೆ ಮಾಡಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಸ್ವಂತ ಉದ್ಯೋಗ ಅಥವಾ ವ್ಯವಹಾರ ಆರಂಭಕ್ಕೆ ಎನ್ ಡಿ ಎ ಸರ್ಕಾರ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಾಲದ ಮೊತ್ತದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ.

ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿಯಲ್ಲಿ ಯುವ ಸಮುದಾಯಕ್ಕೆ 20 ಲಕ್ಷ ರೂ.ವರೆಗೆ ಸಾಲ ಸಿಗಲಿದೆ. ಈ ಮೊದಲು ಮುದ್ರಾ ಯೋಜನೆಯಡಿ ಗರಿಷ್ಠ 10 ಲಕ್ಷ ರೂ.ವರೆಗೆ ಮಾತ್ರ ಹಣಕಾಸಿನ ನೆರವನ್ನು ನೀಡಲಾಗುತ್ತಿತ್ತು.

- Advertisement -


2015ರಲ್ಲಿ ಕೇಂದ್ರ ಸರ್ಕಾರ ಮುದ್ರಾ ಯೋಜನೆಯನ್ನು ಜಾರಿಗೆ ತಂದಿತ್ತು. ಕಳೆದ 9 ವರ್ಷಗಳಲ್ಲಿ 40 ಕೋಟಿಗೂ ಅಧಿಕ ಜನರು ಈ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ.



Join Whatsapp