ಮದರಸಾದಲ್ಲಿ ಕಲಿತವರು ಭಯೋತ್ಪಾದಕರಾಗುತ್ತಿದ್ದಾರೆ: ಮತ್ತೆ ನಾಲಗೆ ಹರಿಯಬಿಟ್ಟ ಮುತಾಲಿಕ್ !

Prasthutha|

ಧಾರವಾಡ: ಸದಾ ಮುಸ್ಲಿಮರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್, ಇದೀಗ ಮತ್ತೆ ನಾಲಗೆ ಹರಿಯಬಿಟ್ಟಿದ್ದಾರೆ. ರಾಜ್ಯದಲ್ಲಿ ಮದರಸಾ ಬ್ಯಾನ್ ಮಾಡಿ ಎಂದು ಒತ್ತಾಯಿಸಿರುವ ಮುತಾಲಿಕ್, ಮದರಸಾದಲ್ಲಿ ಕಲಿತವರು ಭಯೋತ್ಪಾಧಕರಾಗುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -

ಭಾರತದಲ್ಲಿ 3 ಲಕ್ಷ ಮದರಸಾಗಳಿದ್ದು, ಅಲ್ಲಿ ಹಿಂದೂ ವಿರೋಧಿ ವಿಚಾರಗಳನ್ನು ಕಲಿಸಲಾಗುತ್ತಿದೆ. ಇದರಿಂದಲೇ ಮದರಸಾಗಳಲ್ಲಿ ಕಲಿತವರು ಹಿಂದೂ ವಿರೋಧಿಗಳು, ದೇಶ ವಿರೋಧಿ ಹಾಗೂ ಭಯೋತ್ಪಾದಕರಾಗಿ ಹೊರ ಬರುತ್ತಿದ್ದಾರೆ ಎಂದು ನಾಲಗೆ ಹರಿಯಬಿಟ್ಟಿದ್ದಾರೆ.

ಇಲ್ಲಿ ಮದರಸಾವನ್ನು ಕುರಾನ್ ಮತ್ತು ಶರಿಯಾ ಮುಸ್ಲಿಂ ಶಿಕ್ಷಣ ಕೊಡಲು ತೆರೆಯಲಾಗಿದೆ. ಆದರೆ ಇಲ್ಲಿ ಕಲಿಸುತ್ತಿರುವುದು ಹಿಂದೂ ವಿರೋಧಿ ವಿಚಾರಗಳನ್ನು ಎಂದು ಹೇಳಿದ್ದಾರೆ. ಅಲ್ಲದೇ ಶೀಘ್ರವೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮದರಸಾಗಳನ್ನು ಬ್ಯಾನ್ ಮಾಡಬೇಕು ಎಂದು ಮುತಾಲಿಕ್ ಒತ್ತಾಯಿಸಿದ್ದಾರೆ.

Join Whatsapp