ಕಾಂಗ್ರೆಸ್ ಮುಖಂಡ ಅಲ್ತಾಫ್‌ ಖಾನ್ ಮೇಲೆ ದಾಳಿಗೆ ಸಂಚು| ಮೂವರು ವಶಕ್ಕೆ

Prasthutha|

ಬೆಂಗಳೂರು: ಕಾಂಗ್ರೆಸ್ ಮುಖಂಡ ಅಲ್ತಾಫ್‌ ಖಾನ್ ಮೇಲೆ ದಾಳಿ ನಡೆಸಲು ಬಂದಿದ್ದಾರೆ ಎನ್ನಲಾದ ಮೂವರು ಯುವಕರನ್ನು ಜೆ.ಜೆ.ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

ಗೋರಿಪಾಳ್ಯದಲ್ಲಿರುವ ಅಲ್ತಾಫ್‌ ಖಾನ್ ಮನೆ ಬಳಿ ನಿನ್ನೆ ರಾತ್ರಿ 10 ಗಂಟೆಯ ವೇಳೆ ಬಂದ ಆಟೋದಲ್ಲಿ ವ್ಯಕ್ತಿಗಳು ಬಹಳ ಹೊತ್ತು ಅಲ್ತಾಫ್‌ ಗೆ ಕಾದಿದ್ದಾರೆ. ಅಲ್ತಾಫ್‌ ಅವರು ಮನೆಯಿಂದ ಹೊರ ಬಾರದ ಕಾರಣ ಬಚಾವ್ ಆದ ಎಂದು ಗುಂಪು ಮಾತನಾಡಿಕೊಂಡು ಹೋಗುತ್ತಿತ್ತು. ರಿಕ್ಷಾ ನಿಂತ ಕೂಡಲೇ ಅನುಮಾನದಿಂದ ನೋಡುತ್ತಿದ್ದ ಸ್ಥಳೀಯರು ಯುವಕರ ಮಾತುಗಳನ್ನು ಕೇಳಿ ಹಿಂಬಾಲಿಸಿದ್ದಾರೆ.

ತಮ್ಮನ್ನು ಹಿಂಬಾಲಿಸುವುದನ್ನು ನೋಡಿ ಗುಂಪಿನಲ್ಲಿದ್ದ ಓರ್ವ ಪರಾರಿಯಾಗಿದ್ದು, ಮೂವರನ್ನು ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ರಿಕ್ಷಾವನ್ನು ಜಾಲಾಡಿದಾಗ ಮಾರಕಾಸ್ತ್ರ ಪತ್ತೆಯಾಗಿದೆ. ಜೆ.ಜೆ.ನಗರ ಪೊಲೀಸರು ಈಗ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Join Whatsapp