Home ಟಾಪ್ ಸುದ್ದಿಗಳು ಕಾಲುವೆಗೆ ಉರುಳಿದ ಕಾರು: ಮೂವರು ಬೆಸ್ಕಾಂ ಸಿಬ್ಬಂದಿ ಸಾವು

ಕಾಲುವೆಗೆ ಉರುಳಿದ ಕಾರು: ಮೂವರು ಬೆಸ್ಕಾಂ ಸಿಬ್ಬಂದಿ ಸಾವು

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ.

ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು. ಕಾರಿನಲ್ಲಿ ಈ ನಾಲ್ಕು ಮಂದಿ ನಗರಗೆರೆಯಿಂದ ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರಕ್ಕೆ ಬರುತ್ತಿದ್ದರು. ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Join Whatsapp
Exit mobile version