ಮಲ್ಪೆ ಸಮುದ್ರದ ಸೆಳೆತಕ್ಕೆ ಸಿಕ್ಕಿದ ಮೂವರು: ಓರ್ವ ಮೃತ, ಇಬ್ಬರ ರಕ್ಷಣೆ

Prasthutha|

ಉಡುಪಿ: ಮಲ್ಪೆ ಬೀಚ್‌ಗೆ ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಈಜಾಡುತ್ತಿದ್ದ ಮೂವರು ಪ್ರವಾಸಿಗರು ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿದ್ದು, ಮೂವರನ್ನೂ ರಕ್ಷಣಾ ತಂಡದವರು ದಡಕ್ಕೆ ತಂದಿದ್ದರೂ ಒಬ್ಬ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.

- Advertisement -

ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಿರೀಶ್ (26) ಮೃತರು. ಸಂತೋಷ್ (24) ಹಾಗೂ ಹರೀಶ್ (30) ರಕ್ಷಿಸಲ್ಪಟ್ಟವರು. ಅವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಹಾಸನ ಜಿಲ್ಲೆಯ ಬೇಲೂರಿನಿಂದ 20 ಮಂದಿಯ ತಂಡ ಪ್ರವಾಸಕ್ಕೆ ಹೊರಟು ಶೃಂಗೇರಿ, ಆಗುಂಬೆಗೆ ಭೇಟಿ ನೀಡಿದ ಬಳಿಕ ಗುರುವಾರ ಸಂಜೆ ಮಲ್ಪೆ ಬೀಚ್‌ಗೆ ಆಗಮಿಸಿದ್ದರು. ಸಮುದ್ರದಲ್ಲಿ ಮೋಜು‌ ಮಾಡಲು ಬಯಸಿದ ಮೂವರು ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿದ್ದರು. ಸ್ಥಳಕ್ಕೆ ಧಾವಿಸಿ ಬಂದ ಮುಳುಗು ತಜ್ಞ ಈಶ್ವರ ಮಲ್ಪೆ ಮತ್ತವರ ತಂಡದವರು ಮೂವರನ್ನೂ ರಕ್ಷಿಸಿ ದಡಕ್ಕೆ ತಂದಿದ್ದರು. ಮೂವರ ಪೈಕಿ ಗಂಭೀರವಾಗಿದ್ದು, ಗಿರೀಶ್ ಎಂಬಾತ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Join Whatsapp