ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್’ನ ಮೂವರು ಪ್ರಮಾಣವಚನ ಸ್ವೀಕಾರ

Prasthutha|

ಬೆಂಗಳೂರು: ವಿಧಾನ ಪರಿಷತ್ತಿಗೆ ನೂತನವಾಗಿ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಆಯ್ಕೆಯಾಗಿದ್ದು, ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

- Advertisement -


ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ ಮೇಲೆ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು.

Join Whatsapp