ಮಡಿಕೇರಿಯಲ್ಲಿ ಕ್ವಾರಂಟೈನ್ ಕೇಂದ್ರದಿಂದ ಮೂವರು ಕೋವಿಡ್ ಸೋಂಕಿತರು ಪರಾರಿ!

Prasthutha|

ಮಡಿಕೇರಿ: ನಗರದಲ್ಲಿ ಮೂವರು ಕೋವಿಡ್ ಸೋಂಕಿತರು ಪರಾರಿಯಾಗಿದ್ದಾರೆ. ಪರಾರಿಯಾದವರು ಗಾಂಧಿ ಮೈದಾನದ ಬಳಿ ನಿರ್ಮಾಣ ಹಂತದಲ್ಲಿರುವ ರೆಡ್ಡಿ ಕಾಂಪ್ಲೆಕ್ಸ್ ನ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದಾರೆ.

- Advertisement -

ಕಳೆದ ಮೂರು ದಿನಗಳಲ್ಲಿ ಈ ಕಟ್ಟಡದ ಒಟ್ಟು 59 ಕಾರ್ಮಿಕರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿತ್ತು. ಪರಾರಿಯಾಗಿರುವ ಸೋಂಕಿತರನ್ನು ಸುಶೀಲ್ (24), ಶಾಂಬು ಉರವನ್ (25), ಫಂಟು (19) ಎಂದು ಗುರುತಿಸಲಾಗಿದೆ.

ಎಲ್ಲಾ ಸೋಂಕಿತರಿಗೆ ಅದೇ ಕಟ್ಟಡದ ನೆಲಮಹಡಿಯಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಇಂದು ಬೆಳಗ್ಗಿನ ಜಾವ ಕ್ವಾರಂಟೈನ್ ನಲ್ಲಿದ್ದವರಲ್ಲಿ ಮೂವರು ಗೇಟ್ ಜಿಗಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

- Advertisement -

ಪರಾರಿಯಾಗಿರುವವರ ಮೊಬೈಲ್ ಗಳು ಸ್ವಿಚ್ಡ್ ಆಫ್ ಬರುತ್ತಿದೆ. ಇವರೆಲ್ಲರೂ ಜಾರ್ಖಂಡ್ ಮೂಲದವರು ಎಂದು ತಿಳಿದು ಬಂದಿದೆ. ಪರಾರಿಯಾದ ಕಾರ್ಮಿಕರ 7 ಮಂದಿ ಪ್ರಾಥಮಿಕ ಸಂಪರ್ಕಿತರೂ ಕೂಡಾ ಕಾಣೆಯಾಗಿದ್ದಾರೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದು, ಪರಾರಿಯಾದ ಕಾರ್ಮಿಕರ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Join Whatsapp