ನೀರಿನ ಟ್ಯಾಂಕ್‌ಗೆ ಬಿದ್ದು ಮೂವರು ಮೃತ: ಜಿಂದಾಲ್‌ ಸ್ಟೀಲ್‌ ಲಿಮಿಟೆಡ್‌‌ನ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

Prasthutha|

ಬಳ್ಳಾರಿ: ತೋರಣಗಲ್‌ನ ‘ಜಿಂದಾಲ್‌ ಸ್ಟೀಲ್‌ ಲಿಮಿಟೆಡ್‌’ನ ನೀರಿನ ಟ್ಯಾಂಕ್‌ಗೆ ಬಿದ್ದು ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಕಾರ್ಖಾನೆಯ ಎಚ್‌ಎಸ್‌ಎಂ-03 ಘಟಕದ ಉಸ್ತುವಾರಿ, ಉಪಾಧ್ಯಕ್ಷ ಸೇರಿದಂತೆ 6 ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಲಾಗಿದೆ.

- Advertisement -

ಗುರುವಾರ ದುರಂತ ನಡೆದಿದ್ದು, ಸಾವಿಗೀಡಾಗಿದ್ದ ಹೊಸಪೇಟೆಯ ಭುವನಹಳ್ಳಿಯ ಗಂಟೆ ಜಡಿಯಪ್ಪ ಎಂಬವರ ತಮ್ಮ ಮಹೇಂದ್ರ ತೋರಣಗಲ್‌ ಪೋಲಿಸ್‌ ಠಾಣೆಗೆ ದೂರು ನೀಡಿದ್ದರು.

ಎಚ್‌ಎಸ್‌ಎಂ-3 ಘಟಕದ ಉಸ್ತುವಾರಿ ಉಪಾಧ್ಯಕ್ಷ, ಸುರಕ್ಷತೆ ವಿಭಾಗದ ಎವಿಪಿ, ಸುರಕ್ಷತೆ ವಿಭಾಗದ ವ್ಯವಸ್ಥಾಪಕ, ಸಿವಿಲ್ ವಿಭಾಗದ ಅಧಿಕಾರಿ, ಸುರಕ್ಷತೆ ವಿಭಾಗದ ಸೂಪರ್‌ವೈಸರ್, ಮೆಕಾನಿಕಲ್ ವಿಭಾಗದ ಉಸ್ತುವಾರಿ ಅಧಿಕಾರಿ ಸೇರಿದಂತೆ ಆರು ಅಧಿಕಾರಿಗಳ ವಿರುದ್ಧ ಐಪಿಸಿಯ ಸೆಕ್ಷನ್‌ 304(ಎ) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಪ್ರಕರಣ ದಾಖಲಿಸಲಾಗಿದೆ. ಆದರೆ, ಎಫ್‌ಐಆರ್‌ನಲ್ಲಿ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿಲ್ಲ.



Join Whatsapp