ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಮೃತ್ಯು, ಇಬ್ಬರ ಸ್ಥಿತಿ ಗಂಭೀರ

Prasthutha|

ಬೆಳಗಾವಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದೆ.

- Advertisement -

ಸೈಯ್ಯದ್ ಇಸ್ಮಾಯಿಲ್ ದಾವೂದ್ (64), ಸುಶೀಲಾ ಡಿಕೋಸ್ತಾ (73), ವಾಸಿಂ ಹುಸೇನ್ ಖಾನ್ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಜಾವೀದ್ ದಾವೂದ್ (41) ಮತ್ತು ಮುಕ್ತಿಯಾರ್ ಯೂಸುಫ್ ಸೈಯ್ಯದ್ (46) ಎಂದು ಗುರುತಿಸಲಾಗಿದೆ.

- Advertisement -

ಮೂಲಗಳ ಪ್ರಕಾರ ಮೃತರು ಧಾರವಾಡದಿಂದ ಬೆಳಗಾವಿಗೆ ಕಾರಿನಲ್ಲಿ ತೆರಳುತ್ತಿದ್ದರು. ಆದರೆ ರಾಷ್ಟ್ರೀಯ ಹೆದ್ದಾರಿ-4ರ ಹಿರೇ ಬಾಗೇವಾಡಿ ಗ್ರಾಮದ ವೀರಪನ ಕೊಪ್ಪದ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಅವರು ಪ್ರಯಾಣಿಸುತ್ತಿದ್ದ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಘಟನಾ ಸ್ಥಳಕ್ಕೆ ಹಿರೇ ಬಾಗೇವಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp