Home ಟಾಪ್ ಸುದ್ದಿಗಳು ಮಂಜೇಶ್ವರ | ಆ್ಯಂಬುಲೆನ್ಸ್- ಕಾರು ಮಧ್ಯೆ ಅಪಘಾತ: ಮೂವರು ಸಾವು

ಮಂಜೇಶ್ವರ | ಆ್ಯಂಬುಲೆನ್ಸ್- ಕಾರು ಮಧ್ಯೆ ಅಪಘಾತ: ಮೂವರು ಸಾವು

ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ನಡೆದಿದೆ.


ಮೃತರನ್ನು ಶಿವಕುಮಾರ್ (54), ಶರತ್ ಮೆನೋನ್(23) ಮತ್ತು ಸೌರವ್(15) ಎಂದು ಗುರುತಿಸಲಾಗಿದೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಉಷಾ, ಜೊತೆಗಿದ್ದ ಶಿವದಾಸ್ ಮತ್ತು ಆ್ಯಂಬುಲೆನ್ಸ್ ಚಾಲಕ ಗಾಯಗೊಂಡಿದ್ದಾರೆ.

ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಕಾಸರಗೋಡಿಗೆ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ.

Join Whatsapp
Exit mobile version