ಗೋವಾದಲ್ಲಿ ಎರಡು ಕಾರುಗಳ ನಡುವೆ ಅಪಘಾತ: ಕಾರವಾರದ ಮೂವರು ಸಾವು

Prasthutha|

ಕಾರವಾರ: ಎರಡು ಕಾರುಗಳ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಕನ್ನಡ ಮೂಲದ ಮೂವರು ಸಾವನ್ನಪ್ಪಿ ಏಳು ಮಂದಿ ಗಾಯಗೊಂಡಿರುವ ದಾರುಣ ಘಟನೆ ಗೋವಾದ ಕಾಣಕೋಣದ ತಾರಿ ಬಳಿ ಅಪಘಾತ ನಡೆದಿದೆ.

- Advertisement -


ಉತ್ತರ ಕನ್ನಡ ಜಿಲ್ಲೆಯ ಮಾಜಾಳಿ ಮೂಲದ ಹರೀಶ್ ಉಲ್ಲಾಸ ನಾಗೇಕರ್(35), ಉಲ್ಲಾಸ ನಾಗೇಕರ(60), ವೀಣಾ ನಾಗೇಕರ(60) ಮೃತಪಟ್ಟವರು.
ಗಾಯಗೊಂಡಿರುವ 7ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು,ಅವರಲ್ಲಿ ಮೂವರು ಸ್ಥಿತಿ ಗಂಭೀರವಾಗಿದೆ.


ಈ ಬಗ್ಗೆ ಗೋವಾ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

- Advertisement -


ಬಸ್ ಪಲ್ಟಿ:
ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ಮೂಲದ ವಿದ್ಯಾರ್ಥಿಗಳು ಅದೃಷ್ಟವಶಾತ್ ಬಚಾವ್ ಆಗಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 60 ಜನ ಪ್ರಯಾಣಿಸುತ್ತಿದ್ದರು. ಮುರುಡೇಶ್ವರಕ್ಕೆ ಹೋಗುತ್ತಿದ್ದಾಗ ಬಸ್ ಪಲ್ಟಿಯಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Join Whatsapp