ಲಾರಿ- ಕಾರು ಡಿಕ್ಕಿ ಮೂವರು ಸಾವು; ಓರ್ವ ಗಂಭೀರ

Prasthutha|

ಶಿವಮೊಗ್ಗ:  ವೇಗವಾಗಿ ಬಂದ ಲಾರಿಯೊಂದು  ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದು, ಓರ್ವ   ಗಂಭೀರ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದ ಬಳಿ ನಡೆದಿದೆ.

- Advertisement -

ವಿವೇಕ್ (21), ಕಾರ್ತಿಕ್ (23) ಹಾಗೂ ಮೋಹನ್ (22) ಮೃತ ದುರ್ದೈವಿಗಳು. ಕಾರಿನ‌ಲ್ಲಿ ಹಿಂಬದಿ ಕುಳಿತಿದ್ದ ರುದ್ರೇಶ್ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ  ದಾಖಲಿಸಲಾಗಿದೆ.

ಶಿವಮೊಗ್ಗದಿಂದ ಸವಳಂಗ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸವಳಂಗದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ.

- Advertisement -

ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Join Whatsapp