ಬಾಲಕಿಯ ರಕ್ಷಣೆಗೆ ತೆರಳಿದ್ದ ಮೂವರು ಪೊಲೀಸರು ಸೇರಿ ಐವರು ಅಪಘಾತಕ್ಕೆ ಬಲಿ

Prasthutha|

ಟಿಕಾಮ್’ಗಡದಿಂದ ಅಪಹರಣಕ್ಕೊಳಗಾಗಿದ್ದ ಬಾಲಕಿಯ ರಕ್ಷಣೆಗೆ ತೆರಳಿದ್ದ ತಂಡ

- Advertisement -

ಭೋಪಾಲ್: ಅಪಹರಣಕ್ಕೊಳಗಾಗಿದ್ದ ಬಾಲಕಿಯನ್ನು ರಕ್ಷಿಸಲು ಹರಿಯಾಣಕ್ಕೆ ತೆರಳುತ್ತಿದ್ದ ಮೂವರು ಪೊಲೀಸರು ಸೇರಿ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾ ಸಮೀಪದ ಯುಮುನಾ ಎಕ್ಸ್’ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.

‘ಅಪಘಾತದಲ್ಲಿ ಮೃತಪಟ್ಟ ಪೊಲೀಸರು ಮಧ್ಯಪ್ರದೇಶದ ಟಿಕಾಮ್’ಗಡದ ಬುದೇರಾ ಪೊಲೀಸ್ ಠಾಣೆಗೆ ಸೇರಿದವರು.

- Advertisement -

ಘಟನೆಯಲ್ಲಿ ಹೆಡ್ ಕಾನ್ಸ್ಟೇಬಲ್ ಸೇರಿದಂತೆ ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಮಥುರಾದ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಹೆಡ್ ಕಾನ್ಸ್ಟೇಬಲ್ ರಥಿ ರಾಮ್, ಕಾರು ಚಾಲಕ ಜಗದೀಶ್ ಲೋಧಿ ಮತ್ತು ರವಿ ರಾಯ್ ಎಂದು ಗುರುತಿಸಲಾಗಿದೆ.

‘ಪೊಲೀಸರ ತಂಡ ಹರಿಯಾಣಕ್ಕೆ ತೆರಳುತ್ತಿದ್ದ ವೇಳೆ ಟಿಕಾಮ್’ಗಡದ ಸಮೀಪ ರಸ್ತೆ ವಿಭಜಕಕ್ಕೆ ವಾಹನ ಡಿಕ್ಕಿ ಹೊಡೆದಿದೆ. ಮೃತರನ್ನು ಹೆಡ್ ಕಾನ್ಸ್ಟೇಬಲ್ ಭವಾನಿ ಪ್ರಸಾದ್ (52), ಕಾನ್ಸ್ಟೇಬಲ್ ಗಳಾದ ಹೀರಾ ದೇವಿ ಪ್ರಜಾಪತಿ (32), ಕಮಲೇಂದ್ರ ಯಾದವ್ (28) ಎಂದು ಗುರುತಿಸಲಾಗಿದೆ’ ಎಂದು ಟಿಕಾಮ್’ಗಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಲ್. ಚೌರಾಸಿಯಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

‘ಟಿಕಾಮ್’ಗಡದಿಂದ ಅಪಹರಣಕ್ಕೊಳಗಾದ ಬಾಲಕಿಯ ರಕ್ಷಣಾ ಕಾರ್ಯಕ್ಕೆ ನೆರವಾಗಲೆಂದು ಉತ್ತರ ಪ್ರದೇಶದಿಂದ ಕರೆತಂದಿದ್ದ ಪ್ರೀತಿ ಮತ್ತು ಧರ್ಮೇಂದ್ರ ಎಂಬುವವರು ಕೂಡ ಅಪಘಾತದಲ್ಲಿ ಮೃತಪಟ್ಟಿದ್ದಾರೆ’ ಎಂದು ಎಎಸ್ಪಿ ತಿಳಿಸಿದ್ದಾರೆ.

Join Whatsapp