ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

Prasthutha|

ಹಾಸನ: ಪತಿ, ಪತ್ನಿ, ಪುತ್ರ ಸೇರಿದಂತೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ  ಘಟನೆ  ಹೇಮಾವತಿನಗರದಲ್ಲಿ ನಡೆದಿದೆ.

- Advertisement -

ಹೇಮಾವತಿನಗರದ ಸತ್ಯಪ್ರಸಾದ್ (54), ಅನ್ನಪೂರ್ಣ (50) ಮತ್ತು ಗೌರವ್ (21) ಮೃತ ದುರ್ದೈವಿಗಳಾಗಿದ್ದಾರೆ. ಮನೆಯಲ್ಲಿಯೇ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಪೆನ್ಷನ್‌ ಮೊಹಲ್ಲಾಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಮೂವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಮನೆಯಲ್ಲಿ ಶೋಧ ನಡೆಸಿ‌ ಮೊಬೈಲ್ ವಶಕ್ಕೆ ಪಡೆದುಕೊಂಡು ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.

- Advertisement -

Join Whatsapp