ಮಂಗಳೂರು | ಮುಸ್ಲಿಮ್ ಯುವಕನಿಗೆ ಚೂರಿ ಇರಿತ ಪ್ರಕರಣ: ಮೂವರು ಸಂಘಪರಿವಾರದ ಕಾರ್ಯಕರ್ತರ ಬಂಧನ

Prasthutha|

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಬಂಧಿತ ಆರೋಪಿಗಳನ್ನು ಪ್ರಶಾಂತ್ (28), ಧನರಾಜ್ (23), ಯಾಜ್ಞೆಶ್ (22) ಎಂದು ಗುರುತಿಸಲಾಗಿದೆ.


ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಮಾರಣಾಂತಿಕ ಹಲ್ಲೆಗೊಳಗಾದ ಯುವಕ.

- Advertisement -


ರವಿವಾರ ರಾತ್ರಿ ಅಬ್ದುಲ್ ಸಫ್ವಾನ್ ತನ್ನ ಸ್ನೇಹಿತ ಮುಹಮ್ಮದ್ ಸಫ್ವಾನ್ ನೊಂದಿಗೆ ಕರಂಬಾರಿನಿಂದ ಬಜಪೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಗುಂಪೊಂದು ಅವರ ಮೇಲೆ ದಾಳಿ ಮಾಡಿದ್ದು, ಅಬ್ದುಲ್ ಸಫ್ವಾನ್ ಅವರ ಕೈ ಮತ್ತು ಕುತ್ತಿಗೆಗೆ ಚುಚ್ಚಿದ ಗಾಯಗಳಾಗಿವೆ. ಅವರನ್ನು ತಕ್ಷಣ ಬಜಪೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp