ಹೆಬ್ರಿ | ಈಜಲು ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Prasthutha|

ಹೆಬ್ರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಶಿವಪುರ ಗ್ರಾಮದ ಬಟ್ರಾಡಿ ಬಳಿ ನಡೆದಿದೆ. ಶಿವಪುರ ಹೊಳೆಗೆ ಶುಕ್ರವಾರ ಈಜಲೆಂದು ತೆರಳಿದ್ದ ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.

- Advertisement -

ನೀರುಪಾಲಾದ ವಿದ್ಯಾರ್ಥಿಗಳನ್ನು ಸುದರ್ಶನ್, ಕಿರಣ್, ಸೋನಿತ್ ಎಂದು ಗುರುತಿಸಲಾಗಿದ್ದು, ಸುದರ್ಶನ್ ಶವ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಹಿರಿಯಡ್ಕ ಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹೆಬ್ರಿ ತಹಶೀಲ್ಧಾರ್ ಕೆ.ಪುರಂದರ್, ಪಿಎಸ್‌ಐ ಮಹೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp