Home ರಾಜ್ಯ ರೈಲ್ವೆ ಹಳಿಗೆ ತಲೆ ಇಟ್ಟು ಮೂವರು ಆತ್ಮಹತ್ಯೆ ಶಂಕೆ!

ರೈಲ್ವೆ ಹಳಿಗೆ ತಲೆ ಇಟ್ಟು ಮೂವರು ಆತ್ಮಹತ್ಯೆ ಶಂಕೆ!

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ‌ ತೊಂಡೆಭಾವಿ ರೈಲ್ವೆ ನಿಲ್ದಾಣ‌ದ ಸಮೀಪ‌ ಹಳಿ ಮೇಲೆ ಛಿದ್ರಗೊಂಡ ರೀತಿಯಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿವೆ.

ಸುಮಾರು 45 ವರ್ಷದ ಪುರುಷ ಹಾಗೂ ಅಂದಾಜು 25 ವರ್ಷದ ಇಬ್ಬರು ಮಹಿಳೆಯರ ಮೃತದೇಹಗಳಾಗಿವೆ. ಮೃತದೇಹಗಳ ಬಗ್ಗೆ ಹೆಚ್ಚು ವಿವರ ದೊರೆತಿಲ್ಲ. ಮೃತ ವ್ಯಕ್ತಿಯ ಶರ್ಟ್ ಮೇಲೆ ವಿನಾಯಕ ಟೈಲರ್ ಗೌರಿಬಿದನೂರು ಎಂಬ ಗುರುತಿದೆ. ಒಂದೇ ಕುಟುಂಬದ ಸದಸ್ಯರಾಗಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಠಾಣೆಯ‌ ಪೊಲೀಸರು ಹಾಗೂ‌ ರೈಲ್ವೆ ಇಲಾಖೆಯ‌ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ‌ದೇಹಗಳನ್ನು ಶವಾಗಾರಕ್ಕೆ ರವಾನಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

Join Whatsapp
Exit mobile version