Home ಟಾಪ್ ಸುದ್ದಿಗಳು ಚಿಕ್ಕಮಗಳೂರು: ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

ಚಿಕ್ಕಮಗಳೂರು: ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

ಚಿಕ್ಕಮಗಳೂರು: ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಕಡೂರು ತಾಲೂಕಿನ ಅಣ್ಣೆಗೆರೆ ಗ್ತಾಮದಲ್ಲಿ ಭಾನುವಾರ ನಡೆದಿದೆ. ಮೃತ ಯುವಕರನ್ನು ದರ್ಶನ್ (16), ರಾಕೇಶ್ (18), ಕಿರಣ್ (20) ಎಂದು ಗುರುತಿಸಲಾಗಿದೆ.

ಕಡೂರು ತಾಲೂಕಿನ ಬಿಟ್ಟೇನಹಳ್ಳಿ ಗ್ರಾಮದ ಒಟ್ಟು 6 ಯುವಕರು ಕೆರೆಯಲ್ಲಿ ಈಜಲು ತೆರಳಿದ್ದರು ಎನ್ನಲಾಗಿದೆ. ನೀರುಪಾಲಾದ ಮೂವರ ಪೈಕಿ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದ್ದು , ಮತ್ತೋರ್ವ ಯುವಕನ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ.

ಅಗ್ನಿ ಶಾಮಕದಳ, ಪೊಲೀಸ್ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

Join Whatsapp
Exit mobile version