Home ಟಾಪ್ ಸುದ್ದಿಗಳು ಕಾರು- ಟ್ಯಾಂಕರ್ ನಡುವೆ ಅಪಘಾತ: ಮೂವರು ಯುವಕರು ಮೃತ್ಯು

ಕಾರು- ಟ್ಯಾಂಕರ್ ನಡುವೆ ಅಪಘಾತ: ಮೂವರು ಯುವಕರು ಮೃತ್ಯು

ಹುಬ್ಬಳ್ಳಿ: ಕಾರು ಹಾಗೂ ಟ್ಯಾಂಕರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಬಳಿ ಸಂಭವಿಸಿದೆ.


ಮುಹಮ್ಮದ್ ಇಶಾನ್, ಮುಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಮೃತರು.


ಮೃತ ಯುವಕರನ್ನು ಹುಬ್ಬಳ್ಳಿ ನಿವಾಸಿಗಳೆಂದು ಗುರುತಿಸಲಾಗಿದೆ.


ಒಟ್ಟು 6 ಯುವಕರು ಹುಬ್ಬಳ್ಳಿಯಿಂದ ತಮ್ಮ ಕಾರಿನಲ್ಲಿ ಕಾರವಾರದ ಕಡೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಸಂಗಟಿಕೊಪ್ಪದಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾನೆ. ಘಟನೆ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version