ಬೈಕ್-ಕಾರುಗಳ ಮೇಲೆ ಉರುಳಿಬಿದ್ದ ಟಿಪ್ಟರ್ ಲಾರಿ: 6 ಮಂದಿ ಸ್ಥಳದಲ್ಲೇ ಸಾವು

Prasthutha|

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪಘಾತಗಳ ಸರಣಿ ಮುಂದುವರಿದಿದ್ದು, ಟಿಪ್ಪರ್ ಲಾರಿಯೊಂದು 2 ಕಾರು ಹಾಗೂ ಬೈಕ್ ಮೇಲೆ ಉರುಳಿ ಬಿದ್ದ ಪರಿಣಾಮ 6 ಜನರು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಎರಡು ಕಾರಿನಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಕಾಮಗಾರಿಗಾಗಿ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಮಗುಚಿಬಿದ್ದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರನ್ನು ಗಂಭೀರ ಗಾಯಗಳೊಂದಿಗೆ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ನಿಖಿತಾ ರಾಣಿ (29), ವೀಣಮ್ಮ(42), ಇಂದ್ರಕುಮಾರ್ (14), ಕೀರ್ತಿಕುಮಾರ್ (40) ಜಿತಿನ್ ಬಿ. ಜಾರ್ಜ್ ಹಾಗೂ ಬೈಕ್’ನಲ್ಲಿದ್ದ ಟೊಯೋಟಾ ಕಂಪೆನಿಯ ಸಿಬ್ಬಂದಿ ಟಿ.ಜೆ ಶಿವಪ್ರಕಾಶ್ ಎಂದು ಗುರುತಿಸಲಾಗಿದೆ.  ಅಪಘಾತದಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 3 ಕಿಲೋ ಮೀಟರ್‌’ವರೆಗೂ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಕುಂಬಳಗೂಡು ಪೊಲೀಸರು ಟಿಪ್ಪರ್‌ ಸ್ಥಳಾಂತರ ಮಾಡುವ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Join Whatsapp