ತಿಪಟೂರು | ಜೀತಪದ್ದತಿ ಇನ್ನೂ ಜೀವಂತ: 36 ಕಾರ್ಮಿಕರ ರಕ್ಷಣೆ

Prasthutha|

ತಿಪಟೂರು: ಶುಂಠಿ ಜಮೀನಿನಲ್ಲಿ ಜೀತದಾಳುಗಳಂತೆ, ಬಲವಂತವಾಗಿ ದುಡಿಯುತ್ತಿದ್ದ 36 ಕಾರ್ಮಿಕರನ್ನು ಪೊಲೀಸರು ಬುಧವಾರ ರಾತ್ರಿ ರಕ್ಷಿಸಿದ್ದಾರೆ.

- Advertisement -

ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಗ್ರಾಮ, ಮಂಜುನಾಥ ಪುರ ಸುತ್ತಮುತ್ತಲ ಗ್ರಾಮಗಳಲ್ಲಿ ಕೆಲ ಪ್ರಭಾವಿಗಳು ರೈತರಿಂದ ನೂರಾರು ಎಕರೆ ಜಮೀನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು.


ಮೈಸೂರು, ಚಾಮರಾಜನಗರ, ಕೊಳ್ಳೇಗಾಲ, ಬಳ್ಳಾರಿ, ವಿಜಯಪುರ ಸೇರಿ ವಿವಿಧ ಜಿಲ್ಲೆಗಳ ಕಾರ್ಮಿಕರಿಗೆ ಹೆಚ್ಚಿನ ಕೂಲಿ ಆಸೆ ತೋರಿಸಿ ಜಮೀನಿನಲ್ಲಿ ಕೆಲಸ ಮಾಡಲು ಕರೆ ತಂದಿದ್ದರು. ‘ಅಗತ್ಯ ಸೌಲಭ್ಯ, ಕೂಲಿ ಹಣ ಕೊಡದೆ ದುಡಿಸಿ ಕೊಳ್ಳಲಾಗುತ್ತಿದೆ. ಕೆಲಸದ ಸ್ಥಳದಿಂದ ಹೊರ ಹೋಗಲು ಬಿಡುತ್ತಿಲ್ಲ. ಪ್ರಶ್ನೆ ಮಾಡಿದರೆ ಹಲ್ಲೆ ಮಾಡುತ್ತಿದ್ದಾರೆ’ ಎಂದು ಕಾರ್ಮಿಕರು ಆರೋಪಿಸುತ್ತಿದ್ದಾರೆ.
ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯ ತನಕ ಕೆಲಸ ಮಾಡಿದರೂ ಕೂಲಿ ಕೊಟ್ಟಿಲ್ಲ. ತುಂಬಾ ದಿನ ಒಂದು ಕಡೆ ಇರಲು ಬಿಡುತ್ತಿಲ್ಲ’ ಎಂದು ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.

- Advertisement -


ಇದರ ಮಾಹಿತಿ ಪಡೆದ ಹೊನ್ನವಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರ ನೆರವಿನಿಂದ ಕಾರ್ಮಿಕರನ್ನು ರಕ್ಷಿಸಿದ್ದು, ಅವರಿಗೆ ಹೊನ್ನವಳ್ಳಿ ಸಮುದಾಯ ಭವನದಲ್ಲಿ ಆಶ್ರಯ ಕಲ್ಪಿಸಲಾಗಿದೆ.



Join Whatsapp
Exit mobile version