Home ಟಾಪ್ ಸುದ್ದಿಗಳು ತಿರುಪತಿ ಲಡ್ಡು ಪ್ರಕರಣ: ವಿಶೇಷ ತನಿಖೆಗೆ ಆದೇಶಿಸಿದ ಸುಪ್ರೀಂ

ತಿರುಪತಿ ಲಡ್ಡು ಪ್ರಕರಣ: ವಿಶೇಷ ತನಿಖೆಗೆ ಆದೇಶಿಸಿದ ಸುಪ್ರೀಂ

ನವದೆಹಲಿ: ತಿರುಪತಿ ಲಡ್ಡು ವಿವಾದವನ್ನು ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ತಿರುಪತಿ ಲಡ್ಡು ವಿವಾದ ಕೋಟ್ಯಂತರ ಜನರ ನಂಬಿಕೆ ವಿಚಾರವಾಗಿದೆ. ಈ ಪ್ರಕರಣದ ತನಿಖೆಗೆ ಸ್ವತಂತ್ರ ತನಿಖಾ ತಂಡ ಅಗತ್ಯವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದಕ್ಕಾಗಿ ಹೊಸದಾಗಿ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ.

ಪ್ರಕರಣದ ತನಿಖೆಗೆ ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ ಎಸ್‌ ಎಸ್‌ ಎಐ ಅಧಿಕಾರಿಗಳನ್ನು ಒಳಗೊಂಡಿರುವ ಐದು ಸದಸ್ಯರುಗಳ ಹೊಸ ತನಿಖಾ ತಂಡವನ್ನು ರಚಿಸಲಾಗುತ್ತದೆ ಎಂದು ಕೋರ್ಟ್‌ ಹೇಳಿದೆ.

Join Whatsapp
Exit mobile version